ವಿದ್ಯುತ್ ಲೈನ್ ಹೆಸರಲ್ಲಿ ಕೇಂದ್ರ ಸರಕಾರದಿಂದ ರೈತರಿಗೆ ಅನ್ಯಾಯ: ಪದ್ಮಪ್ರಸಾದ್ ಜೈನ್

Picture of Namma Bedra

Namma Bedra

Bureau Report

ಉಡುಪಿ-ಕಾಸರಗೋಡು 400 ಕೆ‌‌.ವಿ. ವಿದ್ಯುತ್ ಲೈನ್ ಯೋಜನೆಯ ಹೆಸರಿನಲ್ಲಿ ಕೇಂದ್ರ ಸರಕಾರವು ಸ್ಟೆರ್ ಲೈಟ್ ಕಂಪೆನಿಗೆ ಲಾಭಮಾಡಿ ಕರಾವಳಿ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಅವರು ಆರೋಪಿಸಿದ್ದಾರೆ.
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ ರೈತರನ್ನು ನಿರ್ಲಕ್ಷಿಸಿ ಸಿಇಎ ವಿದ್ಯುತ್ ಕಾಯ್ದೆಯನ್ನು ಉಲ್ಲಂಘಿಸಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ,ಎರಡು ಜಿಲ್ಲೆಗಳಲ್ಲಿ 27 ಗ್ರಾಮಗಳಲ್ಲಿ ವಿದ್ಯುತ್ ಲೇನ್ ಹಾದು ಹೋಗಬೇಕಿತ್ತು, ಆದರೆ ಸರ್ಕಾರದ ಗಜೆಟ್ ಪತ್ರದಲ್ಲಿ 150 ಗ್ರಾಮಗಳ ಹೆಸರನ್ನು ಸೇರಿಸಲಾಗಿದೆ, ಇದೇ ಅಧಿಸೂಚನೆಯನ್ನು ಬಳಸಿಕೊಂಡು ಭವಿಷ್ಯದಲ್ಲಿ ಹೊಸಬೆಟ್ಟು ಮತ್ತು ಇರುವೈಲು ಗ್ರಾಮಗಳ ಭೂಮಿಯನ್ನು ವಶಪಡಿಸಿಕೊಳ್ಳುವ ಆತಂಕವಿದೆ ಎಂದರು.
ರೈತರು ಈ ಯೋಜನೆಯನ್ನು ತೀವ್ರವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರವು ಅದನ್ನು ಗಣನೆಗೆ ತೆಗೆದುಕೊಳ್ಳದೆ ಇಲಾಖೆಗೆ ಒತ್ತಡ ಹೇರುತ್ತಿದೆ,ಪ್ರಧಾನ ಮಂತ್ರಿ ಕಚೇರಿಯಿಂದ ತಿಂಗಳಿಗೆರಡು ಬಾರಿ ಸಹಾಯಕ ಆಯುಕ್ತರಿಗೆ ಕರೆಮಾಡಿ ಯೋಜನಾ ಪ್ರಗತಿಯ ವಿವರ ಪಡೆಯುತ್ತಿದೆ,ರೈತರ ನೋವಿಗೆ ಸ್ಪಂದಿಸುತ್ತಿಲ್ಲ,ರೈತರಿಗೆ ನೀಡುವ ಪರಿಹಾರದಲ್ಲೂ ತಾರತಮ್ಯ ಎಸಗಿದೆ ಎಂದು ಆರೋಪಿಸಿದರು.
ಈ ಯೋಜನೆಯು ಕೇಂದ್ರ ಸರಕಾರದ ನಿರ್ದೇಶನದಂತೆ ನಡೆಯುತ್ತಿದ್ದರೂ ಭಾರತೀಯ ಕಿಸಾನ್ ಸಂಘವು ರಾಜ್ಯ ಸರಕಾರವನ್ನು ಬೊಟ್ಟು ಮಾಡಿ ಪ್ರತಿಭಟನೆ ಮಾಡಿ ರೈತರಿಗೆ ತಪ್ಪು ಮಾಹಿತಿ ನೀಡುತ್ತಿದೆ,ರೈತರ ಪರ ರಾಜಕೀಯ ಬಿಟ್ಟು ಎಲ್ಲಾ ಪಕ್ಷದವರು ಕೂಡ ಕೈಜೋಡಿಸಬೇಕೆಂದರು.
ವಕೀಲರಾದ ಮರ್ವಿನ್ ಲೋಬೋ, ಕೃಷಿಕರಾದ ಲಿಯೋ ವಾಲ್ಟರ್ ನಝರೆತ್, ಟಿ.ಎನ್.ಕೆಂಬಾರೆ,ರಾಜೇಶ್ ಡಿಕೋಸ್ತ ಹಾಗೂ ಜೀವನ್ ಕ್ರಾಸ್ತಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top