ಸುವರ್ಣ ಕರ್ನಾಟಕ ಜೈ ಭೀಮ್ ಸೇನೆ ರಾಜ್ಯ ಸಮಿತಿಯ ಸಂಸ್ಥಾಪಕರು, ರಾಜ್ಯಾಧ್ಯಕ್ಷರಾದ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ಮೂಡುಬಿದಿರೆಯ ಸರಕಾರಿ ಕಚೇರಿಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಪೀಠಿಕೆಯ ಫೊಟೊಗಳನ್ನು ವಿತರಿಸಲಾಯಿತು.


ಮೂಡುಬಿದಿರೆ ತಾಲೂಕು ಅಧ್ಯಕ್ಷರಾದ ಪ್ರವೀಣ್ ಕುಮಾರ್, ಮಹಿಳಾ ಘಟಕದ ಜತೆ ಕಾರ್ಯದರ್ಶಿಗಳಾದ ಲೀಲಾ,ಪದ್ಮ,ಸದಸ್ಯೆ ವಿನಂತಿ, ಗೋಪಾಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.








