ಪಡುಮಾರ್ನಾಡು ಗ್ರಾಮ ಪಂಚಾಯತ್ ಪಿಡಿಒ ಆಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಸಾಯೀಶ್ ಚೌಟ ಅವರನ್ನು ಪಡುಮಾರ್ನಾಡು ಅಚ್ಚರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ನಡೆದ ಗಣೇಶೋತ್ಸವ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ದಯಾನಂದ ಪೈ,ನ್ಯಾಯವಾದಿ ಶರತ್ ಶೆಟ್ಟಿ, ಉದ್ಯಮಿ ರಾಜೇಂದ್ರ ಜೈನ್,ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಸನಿಲ್,ಸತೀಶ್ ಕರ್ಕೇರ,ಟ್ರಸ್ಟ್ ನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.








































