ಬೈಂದೂರಿನ ಜೆ.ಎನ್.ಆರ್.ಕಲಾಮಂದಿರದಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮಂಗಳೂರಿನ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.
ಆಯೇಷಾ ಶಝಾನ ಬಾಬ್ – ಕುಮಿಟೆಯಲ್ಲಿ ಚಿನ್ನ ಹಾಗೂ ಕತದಲ್ಲಿ ಕಂಚಿನ ಪದಕ ಮತ್ತು ಮುಹಮ್ಮದ್ ತಫಜ್ಜುಲ್ – ಕುಮಿಟೆ ಹಾಗೂ ಕತದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಪದಕ ವಿಜೇತ ವಿದ್ಯಾರ್ಥಿಗಳು ಮೂಡುಬಿದಿರೆ ಶೋರಿನ್ ರಿಯೂ ಕರಾಟೆ ಸಂಸ್ಥೆಯ ಮುಖ್ಯ ಶಿಕ್ಷಕ ,ರೆನ್ಸಿ ಮುಹಮ್ಮದ್ ನದೀಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
