ಮೂಡುಬಿದಿರೆಯ ಒಂಟಿಕಟ್ಟೆ ಕಡಲಕೆರೆಯಲ್ಲಿ ನಡೆದ 22ನೇ ವಷ೯ದ ಕೋಟಿ-ಚೆನ್ನಯ ಜೋಡುಕರೆ ಕಂಬಳವು ಭಾನುವಾರ ಮಧ್ಯರಾತ್ರಿ ಮುಕ್ತಾಯಗೊಂಡಿತು.
ಹಗ್ಗ ಹಿರಿಯ ವಿಭಾಗದಲ್ಲಿ : 23
ಕನೆ ಹಲಗೆ ವಿಭಾಗದಲ್ಲಿ : 13
ಹಗ್ಗ ಕಿರಿಯ ವಿಭಾಗದಲ್ಲಿ : 35
ಅಡ್ಡಹಲಗೆ ವಿಭಾಗದಲ್ಲಿ : 06
ನೇಗಿಲು ಹಿರಿಯ ವಿಭಾಗದಲ್ಲಿ : 38 ಜತೆ
ನೇಗಿಲು ಕಿರಿಯ ವಿಭಾಗದಲ್ಲಿ
: 123 ಹೀಗೆ ಕಂಬಳ ಕೂಟದಲ್ಲಿ ಒಟ್ಟು 244 ಜೊತೆ ಕೋಣಗಳು ಭಾಗವಹಿಸಿದ್ದವು.
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)
ಕನೆ ಹಲಗೆ : ನಿಡೋಡಿ ಕಾನ ರಾಮ ಸುವರ್ಣ(ಪ್ರಥಮ)
ಹಲಗೆ ಮುಟ್ಟಿದವರು : ಕೊಕ್ಕರ್ಣೆ ವಡ್ಡಾಪಿ ಸುರೇಶ್ ನಾಯ್ಕ್
ಅಡ್ಡ ಹಲಗೆ ವಿಭಾಗ: ನಾರಾವಿ ಯುವರಾಜ್ ಜೈನ್ “ಎ” ಪ್ರಥಮ (11.33)
ಹಲಗೆ ಮುಟ್ಟಿದವರು : ಭಟ್ಕಳ ಹರೀಶ್.
ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ” ದ್ವಿತೀಯ : (11.42)
ಹಲಗೆ ಮುಟ್ಟಿದವರು : ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ಹಗ್ಗ ಹಿರಿಯ ವಿಭಾಗ:
ಪ್ರಥಮ : ನಂದಳಿಕೆ ಶ್ರೀಕಾಂತ್ ಭಟ್ “ಎ” (11.22)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ : ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ” (11.34)
ಓಡಿಸಿದವರು : ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ.
ಹಗ್ಗ ಕಿರಿಯ ವಿಭಾಗ :
ಬೆಳುವಾಯಿ ಉಮನೊಟ್ಟು ಶಿವರಾಮ ಹೆಗ್ಡೆ -ಪ್ರಥಮ (11.64)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ.
ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ (ಬಿ.) ದ್ವಿತೀಯ (11.67)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ.
ನೇಗಿಲು ಕಿರಿಯ ವಿಭಾಗ
ಪ್ರಥಮ : ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (11.21)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ : ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.49)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಹಿರಿಯ :
ಪ್ರಥಮ : ಮುನಿಯಾಲು ಉದಯ ಕುಮಾರ್ ಶೆಟ್ಟಿ “ಎ” (11.83)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
ದ್ವಿತೀಯ : ಕಲ್ಯ ಮಿತ್ತಬೆಟ್ಟು ಶ್ರೀಧರ ಕರಿಯಣ್ಣ ಪೂಜಾರಿ (12.05)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ.

ಬಹುಮಾನ ವಿತರಣಾ ಸಮಾರಂಭದಲ್ಲಿ ಮಂಗಳೂರು ವಲಯ ಅರಣ್ಯಾಧಿಕಾರಿ ಮಂಜುನಾಥ ಗಾಣಿಗ, ಮೂಡುಬಿದಿರೆ ಉಪವಲಯಾರಣ್ಯಧಿಕಾರಿಗಳಾದ ಗುರುಮೂತಿ೯, ಬಸಪ್ಪ, ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ಹರಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿಯ ಪ್ರಮುಖರಾದ ಗುಣಪಾಲ ಕಡಂಬ, ಭಾಸ್ಕರ ಕೋಟ್ಯಾನ್, ರಶ್ಮಿತ್ ಶೆಟ್ಟಿ ನೋಣಾಲ್ ಗುತ್ತು,ರಂಜಿತ್ ಪೂಜಾರಿ ಭಾಗವಹಿಸಿ ಬಹುಮಾನ ವಿತರಿಸಿದರು.