ಪುಣೆಯ ಕನ್ಟಾನ್ಮೆಂಟ್ ಪುಸ್ತಕ್ ಪೇಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುಣೆಯ ಖ್ಯಾತ ಮಕ್ಕಳ ತಜ್ಞ,ಮೂಡುಬಿದಿರೆ ಮೂಲದ ಡಾ.ಸುಧಾಕರ ಶೆಟ್ಟಿ ಅವರಿಗೆ ‘ ಸಮಾಜ ಭೂಷಣ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪುಣೆಯ ಮುನ್ಸಿಪಲ್ ಕಾರ್ಪೊರೇಶನ್ ನ ಮಹಾತ್ಮ ಪುಲೆ ಆಡಿಟೋರಿಯಂ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸರಕಾರದ ಮಾಜಿ ಸಚಿವ ಬಾಲಾಸಾಹೇಬ್ ಶಿವಾರ್ಕರ್,ಹೈಕೋರ್ಟ್ ಹಿರಿಯ ನ್ಯಾಯವಾದಿ ಗಿರೀಶ್ ಡಾಂಗೆ,ಕನ್ಟಾನ್ಮೆಂಟ್ ನ ಮಾಜಿ ಉಪಾಧ್ಯಕ್ಷರಾದ ಅರ್ಜುನ್ ಕುರ್ಪೆ,ಬಾಪು ಗಾನ್ಲ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.






