ಶನಿವಾರ ಸುರಿದ ಭಾರೀ ಗಾಳಿ ಮಳೆಯ ಪರಿಣಾಮ ಬೈಕ್ ಸವಾರನೋರ್ವನ ಮೇಲೆ ವಿದ್ಯುತ್ ಕಂಬ ಬಿದ್ದು ಗಾಯಗೊಂಡ ಘಟನೆ ಪುತ್ತಿಗೆ ಗ್ರಾಮದ ಸಂಪಿಗೆಯಲ್ಲಿ ನಡೆದಿದೆ.
ನಿಡ್ಡೋಡಿ ನಿವಾಸಿ ವಿನೋದ್ ಅವರು ನಿಡ್ಡೋಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಪಿಗೆ ಪೆಟ್ರೋಲ್ ಪಂಪ್ ಬಳಿ ಈ ಘಟನೆ ನಡೆದಿದ್ದು ವಿನೋದ್ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.













