ಸತೀಶ್ ಕೆ.ಕಾಶಿಪಟ್ಣ ಅವರಿಗೆ “ಸಹಕಾರ ರತ್ನ” ಪ್ರಶಸ್ತಿ

Picture of Namma Bedra

Namma Bedra

Bureau Report

ಕಳೆದ ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸೇವೆಗಾಗಿ ಪೆರಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸತೀಶ್ ಕೆ.ಕಾಶಿಪಟ್ಣ ಅವರು ” ಸಹಕಾರ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ‌.
ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಅವರು ಕಳೆದ 25 ವರ್ಷಗಳಿಂದ ರಾಜಕೀಯ, ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿರುವುದಲ್ಲದೆ ಸಾಮಾಜಿಕ ಕ್ಷೇತ್ರದಲ್ಲೂ ಗುರುತಿಸಿಕೊಂಡು ಬೆಳ್ತಂಗಡಿ, ಮೂಡುಬಿದಿರೆ ತಾಲೂಕುಗಳಲ್ಲಿ ಜನಪ್ರಿಯರಾಗಿ ಜಿಲ್ಲೆಯ ಗಮನಸೆಳೆದಿದ್ದಾರೆ.
ಈ ಪ್ರಶಸ್ತಿ ಪ್ರದಾನ ಸಮಾರಂಭವು ನ.14 ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top