ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳು, ಉಜಿರೆ ಇವರ ವತಿಯಿಂದ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಮಾಹಿತಿ ಮತ್ತು ಚಿಕಿತ್ಸಾ ಶಿಬಿರವು ಇಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಅಳಿಯೂರಿನ ಹೇಮಾ ಸಭಾ ಭವನದಲ್ಲಿ ನಡೆಯಲಿದೆ.
ಯೋಗ ಮತ್ತು ಪ್ರಕೃತಿ ಚಿಕಿತ್ಸೆ ನೈಸರ್ಗಿಕ ಚಿಕಿತ್ಸಾ ವ್ಯವಸ್ಥೆಯಾಗಿದ್ದು ಇದರಲ್ಲಿ ಯಾವುದೇ ರಾಸಾಯನಿಕ ಜನ್ಯ ಔಷಧಿಗಳನ್ನು ಬಳಸಲಾಗುವುದಿಲ್ಲ, ಬದಲಾಗಿ ಈ ವಿಶಿಷ್ಟ ಚಿಕಿತ್ಸಾ ವಿಧಾನವು ದೇಹವನ್ನು ಒಳಗಿನಿಂದ ಬಲಪಡಿಸುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಗತ್ಯವಿರುವಲ್ಲಿ ಜೀವನಶೈಲಿಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವುದು ಮತ್ತು ಆ ಮೂಲಕ ನಮ್ಮ ದೇಹವು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಸಾಧ್ಯವಾಗುವ ಸುರಕ್ಷಿತ ಮತ್ತು ನೈಸರ್ಗಿಕ ಮಾರ್ಗವನ್ನು ನೀಡುತ್ತದೆ.
ಈ ಶಿಬಿರದಲ್ಲಿ ರಕ್ತದೊತ್ತಡ(ಬಿಪಿ) ಮತ್ತು ಮಧುಮೇಹ (ಶುಗರ್) ತಪಾಸಣೆಗಳನ್ನು ಉಚಿತವಾಗಿ ಮಾಡುವುದಲ್ಲದೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚನೆಗೆ ಅವಕಾಶವಿದೆ ಎಂದು ಎಂದು ಸಂಘಟಕರು ತಿಳಿಸಿದ್ದಾರೆ.






