ರಾಜ್ಯ ‘ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಾದ ಕಂಬಳ ಕೋಣಗಳ ಮಾಲಕರಾದ ಇರ್ವತ್ತೂರು ಭಾಸ್ಕರ ಎಸ್.ಕೋಟ್ಯಾನ್ ಹಾಗೂ ಬಾರ್ಕೂರು ಶಾಂತರಾಮ ಶೆಟ್ಟಿ ಅವರನ್ನು ಬುಧವಾರ ಮೂಡುಬಿದಿರೆಯಲ್ಲಿ ನಡೆದ ರಾಜ್ಯ ಕಂಬಳ ಅಸೋಸಿಯೇಷನ್ ನ ಸಭೆಯಲ್ಲಿ ಸನ್ಮಾನಿಸಲಾಯಿತು.
ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಪ್ರಮುಖರಾದ ಪಿ.ಆರ್.ಶೆಟ್ಟಿ, ಮುಚ್ಚೂರು ಲೋಕೇಶ್ ಶೆಟ್ಟಿ, ವಿಜಯಕುಮಾರ್ ಕಂಗಿನಮನೆ,ಚಂದ್ರಹಾಸ ಸನಿಲ್,ಚಂದ್ರಶೇಖರ ಬೆಳುವಾಯಿ, ಅನಿಲ್ ಶೆಟ್ಟಿ, ಪ್ರಶಾಂತ್ ಕಾಜವ, ಚಿತ್ತರಂಜನ್ ಭಂಡಾರಿ, ವಿಜಯಕುಮಾರ್,ಗೌತಮ್ ಜೈನ್, ರಶ್ಮಿತ್ ಶೆಟ್ಟಿ ,ನಿತೀಶ್ ವೇಣೂರು, ದಿನೇಶ್ ಶೆಟ್ಟಿ ಮಾಳ ಮತ್ತಿತರರು ಉಪಸ್ಥಿತರಿದ್ದರು.






