ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಾರ್ಹ ಸುದ್ಧಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಮೂಡುಬಿದಿರೆ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯವು ತಡೆಯಾಜ್ಞೆ ನೀಡಿದೆ.
ಸುಮಾರು 34 ಮಾಧ್ಯಮ ಸಂಸ್ಥೆಗಳು ಮತ್ತು ವೈಯಕ್ತಿಕವಾಗಿ ಮೂರು ಮಂದಿಗೆ ಈ ಮಧ್ಯಂತರ ಆದೇಶವನ್ನು ಹೊರಡಿಸಲಾಗಿದೆ.
ಸಂದೇಶ್ ಅವರ ಮಾನಹಾನಿ, ವೈಯಕ್ತಿಕ ಬದುಕಿಗೆ ಧಕ್ಕೆ ಬರುವಂತಹ ಯಾವುದೇ ಆಕ್ಷೇಪಾರ್ಹ ಸುದ್ಧಿಗಳನ್ನು ಪ್ರಕಟಿಸದಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.










