ಸ್ಕ್ವಾಯ್ ಅಸೋಸಿಯೇಷನ್ ಆಫ್ ಕರ್ಣಾಟಕ ಇದರ ದ.ಕ.ಜಿಲ್ಲಾ ಸ್ಕ್ವಾಯ್ ಅಸೋಸಿಯೇಷನ್ ವತಿಯಿಂದ 19 ನೇ ರಾಜ್ಯಮಟ್ಟದ ಸ್ಕ್ವಾಯ್ ಚಾಂಪಿಯನ್ ಶಿಪ್ ನಾಳೆ ಮೂಡುಬಿದಿರೆಯ ಬ್ರಹ್ಮಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆಯಲಿದೆ.
ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ.ರಾಜ್ಯದ ಸುಮಾರು 400 ರಷ್ಟು ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ಎಲ್ಲರಿಗೂ ಉಚಿತ ಊಟ ಹಾಗೂ ಉಳಿದುಕೊಳ್ಳಲು ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ, ಮೂಡುಬಿದಿರೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಈ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ಸ್ಕ್ವಾಯ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಸರ್ಫ್ರಾಝ್ ಅಬ್ದುಲ್ ಖಾದ್ರಿ ಹಾಗೂ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಅವರು ತಿಳಿಸಿದ್ದಾರೆ.







































