Latest News

ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

Picture of Namma Bedra

Namma Bedra

Bureau Report

ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಕೋಟದ ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶಿವರಾಮ ಕಾರಂತ ಪ್ರಶಸ್ತಿ’ ಗೆ ಈ ವರ್ಷ ಆಯ್ಕೆಯಾಗಿರುವ ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ ಮೇಘಾಲಯದ ರಾಜ್ಯಪಾಲರಾದ ವಿಜಯ ಶಂಕರ್ ಅವರು ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
   ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತ್ ಗಳಿಗೆ ಪ್ರತಿ ವರ್ಷ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
    ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಾಸುದೇವ ಉಪಾಧ್ಯಾಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ, ಸದಸ್ಯರಾದ ರಮೇಶ್ ಶೆಟ್ಟಿ, ಸತೀಶ್ ಕರ್ಕೇರ,ಕಲ್ಯಾಣಿ ಹಾಗೂ ಸಿಬ್ಬಂದಿಗಳು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top
× ಸುದ್ದಿ ಹಾಗು ಜಾಹೀರಾತು