Latest News

ಕೆಎಸ್ಸಾರ್ಟಿಸಿ ಮತ್ತು ಆಹಾರ ಇಲಾಖಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅರುಣ್ ಕುಮಾರ್ ಶೆಟ್ಟಿ

Picture of Namma Bedra

Namma Bedra

Bureau Report

ಮಂಗಳೂರು ಕಾರ್ಕಳಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲನೆಗೆ ಸಂನಂಧಪಟ್ಟಂತೆ ಹಾಗೂ ಬಿಪಿಎಲ್ ಕಾರ್ಡ್ ರದ್ದುಪಡಿಸುತ್ತಿರುವ ಆಹಾರ ಇಲಾಖಾಧಿಕಾರಿಗಳ ವಿರುದ್ಧ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಎರಡು ವಿಷಯಗಳ ಬಗ್ಗೆ ಅರುಣ್ ಕುಮಾರ್ ಶೆಟ್ಟಿ ಪ್ರಶ್ನಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ಮೂಡುಬಿದಿರೆ ತಾಲೂಕಿನಲ್ಲಿ ಈಗಾಗಲೇ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ಮರು ಚಾಲನೆಗೆ ಸೂಚಿಸಿದರು.
ಪರವಾನಿಗೆ ಪ್ರಕ್ರಿಯೆ ಮುಗಿದ ಕೂಡಲೇ ಶೀಘ್ರದಲ್ಲೇ ಮಂಗಳೂರು- ಕಾರ್ಕಳ ಕೆಎಸ್ಸಾರ್ಟಿಸಿ ಬಸ್ ಚಾಲನೆಯ ಮಾತುಗಳು ಪ್ರಸ್ತಾಪವಾಗಿದೆ ಎಂದು ತಿಳಿದು ಬಂದಿದೆ.

ಕೆಎಸ್ಸಾರ್ಟಿಸಿ ಬಸ್ ಗಳ ಬಗ್ಗೆ ಈ ಹಿಂದೊಮ್ಮೆ ಪ್ರಸ್ತಾಪಿಸಿ ಜಿಲ್ಲಾದ್ಯಂತ ಗಮನಸೆಳೆದಿದ್ದ ಅರುಣ್ ಕುಮಾರ್ ಶೆಟ್ಟಿ ಇದೀಗ ಬಿಪಿಎಲ್ ಕಾರ್ಡ್ ರದ್ದಾಗಿರುವ ಕುರಿತು ಪ್ರಶ್ನಿಸಿ ಬಡವರ ಧ್ವನಿಯಾಗಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

Scroll to Top