ಉತ್ತರ ಕನ್ನಡ ಕರಾಟೆ ಶಿಕ್ಷಕರ ಮತ್ತು ಕ್ರೀಡಾ ಸಂಘ ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಆಯೋಜಿಸಿದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪೀಸ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಕುಮಿಟೆ ಹಾಗೂ ಕಟ ವಿಭಾಗದಲ್ಲಿ ಹಲವಾರು ಪದಕ ಪಡೆದಿದ್ದಾರೆ. ಹುಡುಗರ ವಿಭಾಗದಲ್ಲಿ ಅಮೀರ್ ಅಶ್ಫಾನ್ ಉಳ್ಳಾಲ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಕಂಚಿನ ಪದಕ, ಅಬ್ದುಲ್ ಅತೀಫ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಕಂಚಿನ ಪದಕ, ಈಝೋ ಇಮ್ತಿಯಾಜ್ ಕುಮಿಟೆ ಹಾಗೂ ಕಟ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರು ಶೋರಿನ್ ರಿಯು ಕರಾಟೆ ಅಸೋಸಿಯೇಷನ್ ಮುಖ್ಯ ಶಿಕ್ಷಕ ರೆನ್ಷಿ ನದೀಮ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
